Cauvery Aarti : ಹಿಂದೂ ಸಂಘಟನೆಗಳು ಆ ಒಂದು ಕಾರ್ಯಕ್ಕಾಗಿ ನಾವು ಡಿಕೆ ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸುತ್ತೇವೆ ಎಂದು ಘೋಷಿಸಿದ್ದಾರೆ.
ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆಯಾದ ಕಾವೇರಿ ಆರತಿ (Cauvery Aarti) ಮತ್ತು ಕೆಆರ್ಎಸ್ ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗೆ ಈಗಾಗಲೇ ಸಾಕಷ್ಟು ತೀವ್ರ ವಿರೋಧ ವ್ಯಕ್ತವಾಗಿದೆ. ವಿರೋಧದ ನಡುವೆಯೂ ಯೋಜನೆ ಸಂಬಂಧಿಸಿತದಂತೆ ಇತ್ತೀಚೆಗೆ ಕಾಮಗಾರಿಗಳನ್ನ ಆರಂಭಿಸಿದ್ದ ಸರ್ಕಾರದ ವಿರುದ್ಧ ಕೂಡ ಹೋರಾಟಗಾರರು ಸಿಡಿದೆದಿದ್ದಾರೆ.
ಜೊತೆ ಹಿಂದೂಪರ ಸಂಘಟನೆಗಳ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಮಾತನಾಡಿದ್ದು, ಯೋಜನೆ ರೂಪಿಸಿದ ಡಿಕೆ ಶಿವಕುಮಾರ್ ಹಾಗೂ ಚಲುವರಾಯಸ್ವಾಮಿಗೆ ಅಭಿನಂದನೆ. ಕಾವೇರಿ ಆರತಿಗಾಗಿ ಕಾಂಗ್ರೆಸ್ ಸರ್ಕಾರದ ಪರ ನಾವು ನಿಲ್ಲುತ್ತೇವೆ. ಗಂಗಾ ಆರತಿಗಿಂತ ವಿಭಿನ್ನವಾಗಿ ಕಾವೇರಿ ಆರತಿ ಮಾಡಿ ಎಂದಿದ್ದಾರೆ.
