13
ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ವಿಶೇಷ ಪ್ರಕರಣದಡಿ ಸಚಿವಲಯದಲ್ಲಿ ಅನುಕಂಪನ ಆಧಾರದಲ್ಲಿ ಸಿ ದರ್ಜೆ ಸಹಾಯಕಿ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಮಹಾಂತೇಶ್ ಬೀಳಗಿ ಕುಟುಂಬದವರಿಗೆ ಅನುಕಂಪದ ಹುದ್ದೆ ನೀಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.
