K N Rajanna: ರಾಜ್ಯದಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವ ಜನತೆಯಲ್ಲಿಯೇ ಹೆಚ್ಚಾಗಿ ಹೃದಯ ಘಾತ ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
ಹೌದು, ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಹೃದಯಾಘಾತಕ್ಕೆ ಕಾರಣ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ.
ಅಲ್ಲದೆ ಹೃದಯಾಘಾತ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಸ್ಪತ್ರೆಗಳಲ್ಲಿಯೂ ಈ ಬಗ್ಗೆ ಸಂಬಂಧಿಸಿದ ಸೌಲಭ್ಯ ಒದಗಿಸಲು ಸರ್ಕಾರ ಸಿದ್ಧವಾಗಿದ್ದು, ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಎನ್ನಲಾದ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಈಗಾಗಲೇ ಹೃದ್ರೋಗ ತಜ್ಞರ ತಂಡ ರಚಿಸಿದ್ದು ವರದಿ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು.
