Home » Nelyadi: ನೆಲ್ಯಾಡಿ: ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ!

Nelyadi: ನೆಲ್ಯಾಡಿ: ಮಾನಸಿಕ ಖಿನ್ನತೆಯಿಂದ ವ್ಯಕ್ತಿ ಆತ್ಮಹತ್ಯೆ!

by ಕಾವ್ಯ ವಾಣಿ
0 comments

Nelyadi: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ (Nelyadi) ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಅಶ್ರಫ್(30) ಎಂದು ಗುರುತಿಸಲಾಗಿದೆ.

ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ ಮನೆಯವರೊಂದಿಗೆ ಪದೇ ಪದೇ ಜಗಳ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಶ್ರಫ್‌ನ ಮೊದಲ ಪತ್ನಿ ತವರು ಮನೆಗೆ ಹೋಗಿದ್ದು ಎರಡನೇ ಪತ್ನಿ, ಅಶ್ರಫ್‌ನ ತಂದೆ, ತಾಯಿ, ಹಾಗೂ ಮಕ್ಕಳು ಪ್ರತ್ಯೇಕವಾಗಿ ವಾಸವಾಗಿದ್ದರು. ಅಶ್ರಫ್ ಕಳೆದ ಕೆಲ ಸಮಯಗಳಿಂದ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದರು. ಇದರಿಂದ ಅವರು ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ಹೇಳಲಾಗಿದೆ.

You may also like