2
Mangaluru : ಕೆಲವವು ದಿನಗಳ ಹಿಂದೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಕಾಯ್ದೆ ವಿರೋಧಿಸಿ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 73ರ ಸಮೀಪದ ಅಡ್ಯಾರ್ ಶಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆದಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ (Protester) ಪೊಲೀಸ್ ಅಧಿಕಾರಿಯ ಕಾರಿನಲ್ಲೇ ಡ್ರಾಪ್ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಪ್ರತಿಭಟನೆ ವೇಳೆ ರಾಷ್ಟ್ರೀಯ ಹೆದ್ದಾರಿ ಕಿಲೋಮೀಟರ್ಗಟ್ಟಲೇ ಸ್ತಬ್ಧವಾಗಿತ್ತು. ಹೆದ್ದಾರಿ ಬಂದ್ ಮಾಡಬಾರದು ಎಂಬ ಹೈಕೋರ್ಟ್ ಸೂಚನೆ ಇದ್ದರೂ, ಪ್ರತಿಭಟನಾಕಾರರ ಗುಂಪು ಉದ್ದೇಶಪೂರ್ವಕವಾಗಿ ಹೆದ್ದಾರಿಯನ್ನು ಅಲ್ಲಲ್ಲಿ ಬಂದ್ ಮಾಡಿತ್ತು. ಈ ಸಂದರ್ಭದಲ್ಲಿ ಪ್ರತಿಭಟನೆ ಮುಗಿದ ಬಳಿಕ ಕೆಲ ಪ್ರತಿಭಟನಾಕಾರರಿಗೆ ಮಂಗಳೂರು ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಅವರು ಬಳಸುವ ಕಾರಿನಲ್ಲಿ ಸೈರನ್, ಎಮರ್ಜೆನ್ಸಿ ಲೈಟ್ ಹಾಕಿಕೊಂಡು ಡ್ರಾಪ್ ನೀಡಲಾಗಿದೆ. ಟ್ರಾಫಿಕ್ ನಿಯಂತ್ರಣ ಮಾಡಬೇಕಿದ್ದವರಿಂದಲೇ ರೂಲ್ಸ್ ಬ್ರೇಕ್ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
