4
Mysore: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಜೆ.ಪಿ.ಹುಂಡಿ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತ ಹೊಂದಿದ ಘಟನೆ ನಡೆದಿದೆ. ಹಂಚಿಪುರ ಗ್ರಾಮದ ನಿವಾಸಿಗಳಾದ ಚೆನ್ನಮಲ್ಲಮ್ಮ, ಮಗಳು ರೂಪ, ಅಳಿಯ ಚಿನ್ನಸ್ವಾಮಿ ಮೃತರು.
ಮಾದನಹಳ್ಳಿಯಿಂದ ತಮ್ಮ ಊರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಲ್ಲಹಳ್ಳಿಯಿಂದ ಲಾರಿ ಸಂಗಮ ಕಡೆಗೆ ತೆರಳುತ್ತಿತ್ತು. ದಾರಿ ಮಧ್ಯೆ ಜೆಪಿ ಹುಂಡಿ ಬಳಿ ಈ ಅಪಘಾತ ಸಂಭವಿಸಿದೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
