Mysuru: ಜಿಲ್ಲೆಯ ವಿಜ್ಞಾನ ಶಿಕ್ಷಕ ಕೆ.ಎಸ್.ಮಧುಸೂದನ್ (Madhusudan) ಅವರಿಗೆ ಮಡಿಲಿಗೆ ಈ ಬಾರಿಯ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ (National Teachers’ Award) ದೊರಕಿದೆ.
ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯಲ್ಲಿ ಮಧುಸೂದನ್ ವಿಜ್ಞಾನ ಶಿಕ್ಷಕರಾಗಿದ್ದು, ವರ್ಚುಯಲ್ ರಿಯಾಲಿಟಿ, ಕೃತಕ ಬುದ್ಧಿಮತ್ತೆ, ರೋಬೊಟಿಕ್ಸ್ನಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ.
ಈ ಬಾರಿ ದೇಶದ 45 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಬಂದಿದ್ದು ಇದರಲ್ಲಿ ರಾಜ್ಯದಿಂದ ಆಯ್ಕೆಯಾದ ಏಕೈಕ ಶಿಕ್ಷಕ ಮಧುಸೂದನ್ ಆಗಿರುವುದು ವಿಶೇಷ.
ಇಂಗ್ಲಿಷ್ ಶಿಕ್ಷಣ, ಬೇಸಿಕ್ ಎಲೆಕ್ಟ್ರಾನಿಕ್ಸ್ ಕಲಿಕೆ, ಲರ್ನಿಂಗ್ ಮ್ಯಾನೇಜ್ಮೆಂಟ್,, ಕೃತಕ ಬುದಿಮತ್ತೆ, ರೋಬೊಟಿಕ್ಸ್ ತಂತ್ರಜ್ಞಾನದ ಶಿಕ್ಷಣ, 1 ಮತ್ತು 2ನೇ ತರಗತಿ ಮಕ್ಕಳಿಗೆ ಪ್ರೊಜೆಕ್ಟರ್ ಮೂಲಕ ಸ್ಮಾರ್ಟ್ ಕ್ಲಾಸ್. ಕ್ಯೂಆರ್ ಕೋಡ್ ಮತ್ತು ಸ್ಕ್ಯಾನರ್ ಬಳಸಿ ಮಕ್ಕಳ ದಾಖಲಾತಿ ನಮೂದು, ಮಕ್ಕಳ ಹಾಜರಾತಿ ಮಾಹಿತಿಯು ಪಾಲಕರ ಮೊಬೈಲ್ಗೆ ರವಾನೆ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಬಗ್ಗೆ ವೆಬ್ಸೈಟ್ ಮುಖಾಂತರ ಪಡೆದುಕೊಳ್ಳುವ ರೀತಿಯಲ್ಲಿ ಮಧುಸೂದನ್ ಸಾಫ್ಟ್ವೇರ್ ಅಭಿವೃದ್ಧಿ ಮಾಡಿದ್ದಾರೆ.
Toll free call: ಹೀಗೂ ನಡೆಯುತ್ತೆ ಟೋಲ್ ಫ್ರಿ ಕಾಲ್ ಸ್ಕ್ಯಾಮ್!
