Home » ನೆಲ್ಯಾಡಿ: ಬಸ್ಸು ಹಾಗೂ ಕಾರು ನಡುವೆ ಅಪಘಾತ!! ಧರ್ಮಸ್ಥಳಕ್ಕೆ ತೆರಳುತ್ತಿದ್ದ ಆರು ಮಂದಿಗೆ ಗಾಯ-ಆಸ್ಪತ್ರೆಗೆ ದಾಖಲು

ನೆಲ್ಯಾಡಿ: ಬಸ್ಸು ಹಾಗೂ ಕಾರು ನಡುವೆ ಅಪಘಾತ!! ಧರ್ಮಸ್ಥಳಕ್ಕೆ ತೆರಳುತ್ತಿದ್ದ ಆರು ಮಂದಿಗೆ ಗಾಯ-ಆಸ್ಪತ್ರೆಗೆ ದಾಖಲು

0 comments

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಫೆ.27 ರ ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಓಲ್ವೋ ಬಸ್ಸು ಉದನೆ ತಲುಪುತ್ತಿದ್ದಂತೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಧರ್ಮಸ್ಥಳಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದ್ದು, ಘಟನೆ ನಡೆದ ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

You may also like

Leave a Comment