

ಉತ್ತರಕಾಶಿ: ಉತ್ತರಾಖಂಡದ ಹಿಮಾಲಯ ಪರ್ವತದಲ್ಲಿ ನೆಲೆಸಿರುವ ಶತಮಾನಗಳಷ್ಟು ಹಳೆಯ ದೇವಾಲಯಗಳಾದ ಬದರಿನಾಥ ಮತ್ತು ಕೇದರಿನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲಾಗುವ ಕುರಿತು ಚರ್ಚೆಯಾಗಿದೆ. ಹಿಂದೂಗಳನ್ನು ಹೊರತುಪಡಿಸಿ ಬೇರೆ ಧರ್ಮದವರಿಗೆ ಈ ದೇವಾಲಯಗಳಿಗೆ ಪ್ರವೇಶ ನಿಷೇಧ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.
ಚಾರ್ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಈ ಎರಡು ದೇವಾಲಯಗಳಿಗೆ ಹಿಂದೂಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಈ ದೇವಾಲಯಗಳನ್ನು ನಿರ್ವಹಿಸುವ ದೇವಾಲಯ ಸಂಸ್ಥೆ ಘೋಷಿಸಿದೆ.
ಬದರಿನಾಥ-ಕೇದರನಾಥ ಧಾಮ ಸೇರಿ ಬದರಿನಾಥ ಕೇದಾರನಾಥ ದೇವಾಲಯ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತ ಪ್ರಸ್ತಾವನೆಯನ್ನು ಮುಂಬರುವ ದೇವಾಲಯ ಸಮಿತಿ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗುವುದು.
ಗಂಗೋತ್ರಿ ಧಾಮಕ್ಕೆ ಮಾತ್ರ ಈ ನಿರ್ಬಂಧ ಸೀಮಿತವಾಗಿರುವುದಿಲ್ಲ. ಇದು ಮಾ ಗಂಗೆಯ ಚಳಿಗಾಲದ ವಾಸಸ್ಥಾನ ಎಂದು ಕರೆಯಲ್ಪಡುವ ಮುಖ್ಬಾಕ್ಕೂ ಅನ್ವಯಿಸುತ್ತದೆ.













