Rahul Gandhi: ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಹಿನ್ನಲೆ ಕೇಂದ್ರದ ಈ ಕ್ರಮ ವಿರೋಧಿಸಿ ಆಗಸ್ಟ್ 5ರಂದು ಫ್ರೀಡಂ ಪಾರ್ಕ್ನಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಪ್ರತಿಭಟನಾ ರ್ಯಾಲಿ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನಾಳೆ ಶಿಬು ಸೊರೇನ್ ಅಂತ್ಯಕ್ರಿಯೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಇಲ್ಲಿಗೆ ಬಂದು ಅಲ್ಲಿಗೆ ಹೋಗೋದು ಅಂತ ಮೊದಲು ಮಾತುಕತೆ ಆಗಿತ್ತು. ಆದ್ರೆ ಇದು ದೊಡ್ಡ ಸಂದೇಶ ಕೊಡುವ ದಿನ, ಆದ್ದರಿಂದ ಗಡಿಬಿಡಿ ತೀರ್ಮಾನ ಬೇಡ ಅಂತ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.
ಇದನ್ನೂ ಓದಿ: Belthangady: ಬೆಳ್ತಂಗಡಿ: ಅಕ್ರಮವಾಗಿ ಶೇಖರಿಸಿಟ್ಟ ಗಾಂಜಾ ವಶಪಡಿಸಿಕೊಂಡ ಪೊಲೀಸರು: ಆರೋಪಿ ಪರಾರಿ!
