

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮಂಗಳವಾರ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊಡಗು ಹಾಸನದಲ್ಲಿ ತಂಪುಗಾಳಿ, ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಮಳೆಯ ಮುನ್ಸೂಚನೆ ಇದೆ. ಈ ರೀತಿಯ ವಾತಾವರಣ ಮುಂದಿನ 48 ಗಂಟೆ ತನಕ ಇದೇ ರೀತಿ ಇರುವುದಗಿ ಹವಾಮಾನ ಇಲಾಖೆ ತಿಳಿಸಿದೆ.













