Home » Renukaswamy: ಚಿತ್ರದುರ್ಗದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ; ಹೆಸರೇನು ಗೊತ್ತೇ?

Renukaswamy: ಚಿತ್ರದುರ್ಗದ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ; ಹೆಸರೇನು ಗೊತ್ತೇ?

0 comments

Renukaswamy Son Naming Ceremony: ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ  ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ಪೊಲೀಸರು 17 ಮಂದಿ ಆರೋಪಿಗಳನ್ನು ಬಂಧನ ಮಾಡಿದ್ದರು. ದರ್ಶನ್‌ ಆಂಡ್‌ ಗ್ಯಾಂಗ್‌ನ ಮೇಲೆ ಈ ಕೊಲೆ ಆರೋಪವಿದ್ದು, ಇದೀಗ ಇವರುಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಇದೀಗ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಮನೆಯಲ್ಲಿ ಸಂಭ್ರಮದ ವಾತಾವರಣವೊಂದು ಎದುರಾಗಿದೆ. ಮಗುವಿನ ನಾಮಕರಣದ ಶುಭಕಾರ್ಯ ನಡೆಯುತ್ತಿದೆ. ರೇಣುಕಾಸ್ವಾಮಿ ಮಗುವಿಗೆ 5 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ತೊಟ್ಟಿಲು ಶಾಸ್ತ್ರ ನಡೆದಿದೆ. ರೇಣುಕಾಸ್ವಾಮಿ ತಂದೆ ಕಾಶಿನಾಥ ಶಿವನಗೌಡ್ರು, ತಾಯಿ ರತ್ನ ಪ್ರಭಾ ಅವರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.

ರೇಣುಕಾಸ್ವಾಮಿಯ ಮುದ್ದಾದ ಗಂಡು ಮಗುವಿಗೆ ಶಶಿಧರ ಸ್ವಾಮಿ ಎಂದು ನಾಮಕರಣ ಮಾಡಲಾಗಿದೆ. ತಂಗಿ ಸುಚೇತ ರೇಣುಕಾಸ್ವಾಮಿ ಪುತ್ರನಿಗೆ ನಾಮಕರಣ ಮಾಡಿದ್ದಾರೆ. ಮೂರು ಬಾರಿ ಶಶಿಧರ ಸ್ವಾಮಿ ಎಂದು ಮಗುವಿನ ಕಿವಿಯಲ್ಲಿ ಹೇಳಿ ಶಾಸ್ತ್ರ ಮಾಡಿದ್ದಾರೆ.

You may also like