Home » ಪುಂಜಾಲಕಟ್ಟೆ : ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ | ಪೊಲೀಸ್ ಸಿಬ್ಬಂದಿ ಮೃತ್ಯು

ಪುಂಜಾಲಕಟ್ಟೆ : ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ | ಪೊಲೀಸ್ ಸಿಬ್ಬಂದಿ ಮೃತ್ಯು

0 comments

ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.

ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ.

ಪುಂಜಾಲಕಟ್ಟೆಯ ಇತರ ಸಿಬ್ಬಂದಿ ಗಳೊಂದಿಗೆ ಗೃಹ ಪ್ರವೇಶಕ್ಕೆ ತೆರಳಿದ್ದು, ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸು ಆಗುತ್ತಿದ್ದರೆ ಉಳಿದವರು ಇಲಾಖಾ ಜೀಪಿನಲ್ಲಿ ಹಿಂಬಂದಿಯಿಂದ ಆಗಮಿಸುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಳು ಆಬೂಬಕ್ಕರ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಈ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗಿತ್ತು. ಇಲ್ಲಿನ ವೈದ್ಯರು ರಜೆಯ ಮೇಲೆ ತೆರಳಿದ್ದರೆ ಇತರ ಸಿಬ್ಬಂದಿಗಳು ಕೂಡ ಆಸ್ಪತ್ರೆಯಲ್ಲಿ ಇರಲಿಲ್ಲ.ಚಿಂತಾಜನಕ ಸ್ಥಿತಿಯಲ್ಲಿದ್ದ ಅಬೂಬಕ್ಕರ್ ಅವರನ್ನು ತಕ್ಷಣ ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.ಹೆದ್ದಾರಿಯಲ್ಲಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಒಬ್ಬನೇ ಒಬ್ಬ ಸಿಬ್ಬಂದಿಗಳಿಲ್ಲದೆ ಬೀಗ ಹಾಕಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜೀವ ಉಳಿಸಬೇಕಾದ ಸರಕಾರಿ ಆಸ್ಪತ್ರೆಗಳ ಬೇಜಾವಬ್ದಾರಿತನಕ್ಕೆ ಇದೊಂದು ಉದಾಹರಣೆ ಆಗಿದೆ. ಈ ಹಿಂದೆಯೂ ಕೂಡ ಇದೇ ರೀತಿಯ ಘಟನೆಗಳಾದಗಲೂ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಗಾಯಳುಗಳು, ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ಪ್ರಸಂಗಗಳು ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಶುಕ್ರವಾರ ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಎಚ್.ಸಿ.ಆಬೂಬಕ್ಕರ್ ಅವರು ಜೀವನಮ್ಮರಣ ಹೋರಾಟ ನಡೆಸುತ್ತಿದ್ದರು, ಈ ಸಂದರ್ಭದಲ್ಲಿ ಅವರಿಗೆ ತುರ್ತು ಚಿಕಿತ್ಸೆ ದೊರಕದಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬರುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿಹೋಗಿದೆ.ಇವರ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಸಿಬ್ಬಂದಿಗಳ ಕಣ್ಣೆದುರಲ್ಲೆ ಪ್ರಾಣ ಬಿಟ್ಟ ಸಹಪಾಠಿಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.

ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಸಹೋದ್ಯೋಗಿಯ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಠಾಣೆ ಶೋಕತಪ್ತವಾಗಿದೆ.ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ

You may also like

Leave a Comment