Home News ಶಿವಮೊಗ್ಗ: ಬ್ಯಾಂಕಿಗೆ ಬಂದ ಜಿಂಕೆ!

ಶಿವಮೊಗ್ಗ: ಬ್ಯಾಂಕಿಗೆ ಬಂದ ಜಿಂಕೆ!

ಶಿವಮೊಗ್ಗ: ಶಂಕರಘಟ್ಟದಲ್ಲಿ ಇರುವ ಡಿಸಿಸಿ ಬ್ಯಾಂಕ್‌ ಗೆ ನುಗ್ಗಿದ ಜಿಂಕೆಯನ್ನು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿ ದ್ದಾರೆ.

ನಾಯಿಗಳಿಂದ ತಪ್ಪಿಸಿ ಕೊಳ್ಳುವ ಭರದಲ್ಲಿ ಜಿಂಕೆ ಕುವೆಂಪು ವಿವಿ ಆವರಣದಿಂದ ಜಿಗಿದು ಡಿಸಿಸಿ ಬ್ಯಾಂಕಿಗೆ ನುಗ್ಗಿತ್ತು.

ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿರುವ ಡಿಸಿಸಿ ಬ್ಯಾಂಕ್‌ ಶಾಖೆಗೆ ಜಿಂಕೆ ನುಗ್ಗಿದ್ದು, ಗಾಬರಿಯಲ್ಲಿ ಗಾಜಿಗೆ ಗುದ್ದಿಕೊಂಡು ಕುಸಿದು ಬಿದ್ದಿತ್ತು. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಿಂಕೆಯ ರಕ್ಷಣೆ ಮಾಡಿದ್ದಾರೆ. ಬಳಿಕ ಅದನ್ನು ಸಮೀಪದ ಅರಣ್ಯಕ್ಕೆ ಕೊಂಡೊಯ್ದು ಬಿಡುಗಡೆ ಮಾಡಿದ್ದಾರೆ.