Home » ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

ಸುಳ್ಯ : ಪಾದಾಚಾರಿಗೆ ವಾಹನ ಡಿಕ್ಕಿಯಾಗಿ ಗಂಭೀರ

by Praveen Chennavara
0 comments

ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಗಾಯಗೊಂಡ ಘಟನೆ ನಡೆದಿದೆ.

ಪೆರಾಜೆ ಬಂಗಾರಕೋಡಿಯ ಗೋಪಾಲ ಕಜೆಮೂಲೆ ಎಂದು ತಿಳಿದುಬಂದಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋಪಾಲ ಕಜೆಮೂಲೆಯವರು ರಸ್ತೆ ದಾಟುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿ ಹೊಡೆದು ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಅದೇ ಬೊಲೆರೋದಲ್ಲಿ ಸರಕಾರಿ ಆಸ್ಪತ್ರೆಗೆ ತಂದು ಅಲ್ಲಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಲಾಗಿದೆ.

You may also like

Leave a Comment