Home » ಮುರುಳ್ಯ : ಹೋರಿ ತಿವಿದು ವ್ಯಕ್ತಿ ಮೃತ್ಯು

ಮುರುಳ್ಯ : ಹೋರಿ ತಿವಿದು ವ್ಯಕ್ತಿ ಮೃತ್ಯು

by Praveen Chennavara
0 comments

ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11 ರ ಸಂಜೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ.

ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ(55ವ.) ಮೃತಪಟ್ಟ ವ್ಯಕ್ತಿ.

ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು ತೆರಳಿದ್ದರೆನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಡಿ.12ರ ಬೆಳಗ್ಗೆ ಆ ದಾರಿಯಲ್ಲಿ ಬಂದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದು ಹತ್ತಿರ ಹೋಗಿ ನೋಡುವಾಗ ಅವರು ಮೃತಪಟ್ಟಿರುವುದು ತಿಳಿದು ಬಂತು.

ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು,ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

You may also like

Leave a Comment