2
Bengaluru: ಕಲ್ಲಂಗಡಿ, ಕಬಾಬ್, ಗೋಬಿ ಮಂಚೂರಿ, ಪನ್ನೀರ್, ಗೋಲ್ ಗಪ್ಪಾ ಬೆನ್ನಲ್ಲೇ ಐಸ್ಕ್ರೀಂ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಐಸ್ಕ್ರೀಂ ಘಟಕಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಐಸ್ಕ್ರೀಂ ಸ್ಯಾಂಪಲ್ಗಳನ್ನು ಲ್ಯಾಬ್ ಗೆ ರವಾನೆ ಮಾಡಿದ್ದಾರೆ.
ಇದೀಗ ಬಿಸಿಲ ಬೇಗೆ ಹೆಚ್ಚಾಗಿರುವುದರಿಂದ ಜನರು ತಂಪು ಪಾನೀಯವನ್ನ, ಐಸ್ಕ್ರೀಂ ಅನ್ನು ಜಾಸ್ತಿ ಸೇವಿಸುತ್ತಾರೆ. ಐಸ್ಕ್ರೀಂನಲ್ಲಿ ಕಲರ್ ಬಳಸಿರುವ ಕಾರಣ ಎಚ್ಚೆತ್ತುಕೊಂಡ ಅಧಿಕಾರಿಗಳು ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಸ್ಯಾಂಪಲ್ಗಳನ್ನು ಲ್ಯಾಬ್ಗೆ ರವಾನೆ ಮಾಡಿದ್ದಾರೆ.
