Maharastra : ಇಂದು ಚಿನ್ನದ ಬೆಲೆ ಗಗನಕ್ಕೇರಿದೆ. ಕೊಳ್ಳುವಾಗಲೇ ಚಿನ್ನ ಕೈ ಸುಡುತ್ತಿದೆ. ಬಡವರಿಗಂತೂ ಚಿನ್ನವನ್ನು ಕೊಳ್ಳುವುದು ಕನಸಿನ ಮಾತಾಗಿ ಉಳಿಯುತ್ತದೆ ಎಂಬುದು ಹಲವರ ಮಾತು. ಆದರೂ ಕೂಡ ಅನೇಕರು ಅಲ್ಪಸ್ವಲ್ಪ ಹಣವನ್ನು ಕೂಡಿಟ್ಟು ತಮ್ಮ ಆಸೆಯನ್ನು ಈಡೇರಿಸಿಕೊಳ್ಳುತ್ತಾರೆ. ಅಂತೆಯೇ ಇಲ್ಲೊಬ್ಬರು 90ರ ಆಸುಪಾಸಿನ ಅಜ್ಜನಿಗೆ ತನ್ನ ಹೆಂಡತಿಗೆ ಚಿನ್ನದ ಸರ ಕೊಡಿಸಬೇಕೆಂಬ ಆಸೆ. ಇದಕ್ಕಾಗಿ ಅವರು ಚಿನ್ನದ ಅಂಗಡಿಗೆ ಬಂದಾಗ ಏನು ನಡೆಯಿತು ಗೊತ್ತಾ?
90ರ ಆಸು ಪಾಸಿನ ವೃದ್ಧ ದಂಪತಿಯೊಂದು ಪಂಡರಾಪುರ ವಿಠಲನ ದರ್ಶನಕ್ಕೆ ತೆರಳಿತ್ತು. ಆ ಹಿರಿಯ ಜೀವಕ್ಕೆ ಪಾಂಡುರಂಗನ ದರ್ಶನ ಮೊದಲು ತಮ್ಮ ಪತ್ನಿಗೆ ಚಿನ್ನದ ಕರಿಮಣಿ ಸರ ಕೊಡಿಸಬೇಕು ಎಂಬ ಬಯಕೆ ಅವರದಾಗಿತ್ತು. ಅದರಂತೆ ಈ ಹಣ್ಣು ಹಣ್ಣು ಪ್ರಾಯದ ಅಜ್ಜ ತಮ್ಮ ಪತ್ನಿಯನ್ನು ಕರೆದುಕೊಂಡು ತಾವು ಎಷ್ಟೋ ಕಾಲದಿಂದ ಕೂಡಿಟ್ಟ ಚಿಲ್ಲರೆ ಪಲ್ಲರೆ ಹಣವನ್ನೆಲ್ಲಾ ತೆಗೆದುಕೊಂಡು ಬಂದು ಚಿನ್ನದ ಅಂಗಡಿಯೊಂದಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಚಿನ್ನದ ಅಂಗಡಿಯ ಒಳಗಡೆ ನಡೆದ ಘಟನೆ ಎಂಥವರ ಕಣ್ಣಲ್ಲು ನೀರು ತರಿಸುವಂತಿತ್ತು. ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಗೋಪಿಕಾ ಜ್ಯುವೆಲ್ಲರಿ ಸಂಭಾಜಿನಗರ ಎಂಬ ಇನ್ಸ್ಟಾ ಪೇಜ್ನಿಂದ ಈ ವೀಡಿಯೋ ಪೋಸ್ಟ್ ಆಗಿದೆ
ಅಂದಹಾಗೆ ಹಣ್ಣು ಹಣ್ಣು ಪ್ರಾಯದ ಅಜ್ಜ ತಮ್ಮ ಪತ್ನಿಯನ್ನು ಕರೆದುಕೊಂಡು ತಾವು ಎಷ್ಟೋ ಕಾಲದಿಂದ ಕೂಡಿಟ್ಟ ಚಿಲ್ಲರೆ ಪಲ್ಲರೆ ಹಣವನ್ನೆಲ್ಲಾ ತೆಗೆದುಕೊಂಡು ಬಂದು ಚಿನ್ನದ ಅಂಗಡಿಯೊಂದಕ್ಕೆ ಬಂದಿದ್ದರು. ಪಾಂಡರಪುರದ ಪಾಂಡುರಂಗನ ದರ್ಶನಕ್ಕೆ ಹೊರಟ ಈ ಇಳಿಪ್ರಾಯದ ಜೋಡಿಯನ್ನು ನೋಡಿ ಆ ಜ್ಯುವೆಲ್ಲರಿ ಶಾಪ್ ಮಾಲೀಕರಿಗೆ ಏನನಿಸಿತೋ ಏನೋ ಅಜ್ಜ ಅಜ್ಜಿಯ ಬಳಿಯಿಂದ ಯಾವ ಕಾಸನ್ನು ಪಡೆಯದೇ ಕೇವಲ ಆಶೀರ್ವಾದವನ್ನು ಮಾತ್ರ ಬೇಡಿ ಜ್ಯುವೆಲ್ಲರಿ ಮಾಲೀಕರು ಅಜ್ಜನ ಆಸೆ ಈಡೇರಿಸಿದ್ದಾರೆ.
ಹೌದು, ಸರ ಕೊಳ್ಳಲು ವೃದ್ಧ ದಂಪತಿ ಜ್ಯುವೆಲ್ಲರಿ ಶಾಪ್ಗೆ ಬಂದಿದ್ದು, ಅಲ್ಲಿ ಪತ್ನಿಗಾಗಿ ಬಂಗಾರದ ಮಂಗಳಸೂತ್ರವನ್ನು ಅವರು ಕೇಳುತ್ತಾರೆ. ಜೊತೆಗೆ ತಾವು ಚೀಲದಲ್ಲಿ ತಂದಿದ್ದ ಹಣವನ್ನೆಲ್ಲಾ ಅಲ್ಲಿ ಅವರು ನೀಡುವುದಕ್ಕೆ ಪ್ರಯತ್ನಿಸುತ್ತಾರೆ. ಆದರೆ ಸ್ವತಃ ಜ್ಯುವೆಲ್ಲರಿ ಶಾಪ್ ಮಾಲೀಕ ಅಜ್ಜನಿಗೆ ಈ ಅಜ್ಜಿಯ ಮೇಲಿನ ಪ್ರೀತಿಗೆ ಭಾವುಕರಾಗಿದ್ದು, ಯಾವ ಹಣವನ್ನು ಪಡೆಯದೇ ಅಜ್ಜ ಅಜ್ಜಿಗೆ ಚಿನ್ನದ ಸರ ಹಾಗೂ ಕಿವಿಯೋಲೆಯನ್ನು ನೀಡಿದ್ದಾರೆ. ನಿಮ್ಮಿಂದ ನಾನು ದುಡ್ಡು ತೆಗೆದುಕೊಳ್ಳಲ್ಲ, ತೆಗೆದುಕೊಂಡರೆ ಆ ಪಾಡುರಂಗ ಮೆಚ್ಚಲ್ಲ, ಹಣಕ್ಕಿಂತ ನಿಮ್ಮ ಆಶಿರ್ವಾದ ಬೇಕು.. ಆ ಪಾಂಡುರಂಗನ ಆಶೀರ್ವಾದ ನನ್ನ ಮೇಲಿರಲಿ ಎಂದು ಹಾರೈಸಿ ಎಂದು ಹೇಳುತ್ತಾರೆ. ಇದಕ್ಕೆ ಹಣ ತೆಗೆದುಕೊಳ್ಳದೇ ಹೋದರೆ ತಪ್ಪಾಗುತ್ತದೆ ಎಂದು ವೃದ್ಧ ಹೇಳಿದ್ದಾರೆ. ಇದಕ್ಕೆ ಜ್ಯುವೆಲ್ಲರಿ ಶಾಪ್ ಮಾಲೀಕ ನಿಮ್ಮ ಖುಷಿಗೆ ಸರಕ್ಕೆ 10 ರೂ. ಕಿವಿಯೊಲೆಗೆ 10 ರೂ.. ಕೊಡಿ ಎಂದು ಹೇಳುತ್ತಾರೆ. ಅಲ್ಲದೇ ಈಗಿನ ಗಗನಕ್ಕೇರಿರುವ ಬಂಗಾರದ ದರದ ಮುಂದೆ ಈ ವೃದ್ಧ ದಂಪತಿ ಕೂಡಿಟ್ಟ ಹಣ ಯಾವುದಕ್ಕೂ ಬಾರದು. ಆದರೆ ಅವರನ್ನು ಸುಮ್ಮನೆ ಹಾಗೆ ಕಳಿಸಲು ಬಯಸದ ಅಂಗಡಿ ಮಾಲೀಕ ಉದಾರತೆ ತೋರಿ ಬಂಗಾರದ ಸರ ಹಾಗೂ ಕಿವಿಯೋಲೆ ಕೊಡಿಸಿದ್ದು, ಇದಕ್ಕೆ ವೃದ್ಧ ದಂಪತಿ ಬಹಳ ಭಾವುಕರಾಗಿದ್ದಾರೆ.
ಜ್ಯುವೆಲ್ಲರಿ ಶಾಪ್ ನೀಡಿದ ಈ ಬಂಗಾರದ ಸರಕ್ಕೆ ಕಡಿಮೆ ಎಂದರೂ ಇಂದಿನ ಚಿನ್ನದ ದರದ ಮುಂದೆ ಎರಡು ಲಕ್ಷಕ್ಕಿಂತ ಮೇಲಾಗುವುದು ಪಕ್ಕಾ. ವೃದ್ಧನಿಗೆ ತನ್ನ ಪತ್ನಿಗೆ ಚಿನ್ನ ಕೊಡಿಸುವ ಮುಗ್ಧ ಪ್ರೇಮದ ಜೊತೆ ಜ್ಯುವೆಲ್ಲರಿ ಶಾಪ್ ಮಾಲೀಕನ ಉದಾರತೆ ಈಗ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋ ಕಂಡ ಅನೇಕರು ಚಿನ್ನದ ಅಂಗಡಿ ಮಾಲೀಕರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿ ಹರಸಿ, ಹಾರೈಸಿದ್ದಾರೆ.
https://www.instagram.com/reel/DK7R-XJzC2g/?igsh=bTdxeThidXlhcGMz
