2
Actor Kishore: ಬೆಂಗಳೂರಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ನಟ ಕಿಶೋರ್ ಅವರು ” ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ” ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ನನಗೆ ಇಷ್ಟವಾಯಿತು. ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ಪ್ರಶ್ನೆ ಮಾಡಿದ್ದಾರೆ.
ನಂತರ ಸಿದ್ದರಾಮಯ್ಯನವರಂಥ ವ್ಯಕ್ತಿತ್ವ ಇರುವುದು ಬಹಳ ಮುಖ್ಯ ಎಂದು ಹೇಳಿದರು. ಈ ಮೂಲಕ ನಟ ಕಿಶೋರ್ ಅವರು ಮುಖ್ಯಮಂತ್ರಿಗಳ ಹೇಳಿಕೆಯನ್ನು ಬೆಂಬಲಿಸಿದಂತಾಗಿದೆ. ಅಲ್ಲದೇ, ಮಾಂಸ ತಿಂದು ದೇವಸ್ಥಾನಕ್ಕೆ ಹೋದರೆ ತಪ್ಪೇನು? ಎಂದು ಮರು ಪ್ರಶ್ನೆ ಮಾಡಿದರು.
