Home » ಬಲೀಂದ್ರ ಪೂಜೆ ಮಾಡಲು ಗದ್ದೆಗೆ ಹೋಗಿದ್ದ ಯುವಕ ವಿಷ ಜಂತು ಕಡಿದು ಮೃತ್ಯು

ಬಲೀಂದ್ರ ಪೂಜೆ ಮಾಡಲು ಗದ್ದೆಗೆ ಹೋಗಿದ್ದ ಯುವಕ ವಿಷ ಜಂತು ಕಡಿದು ಮೃತ್ಯು

by Praveen Chennavara
0 comments

ಉಡುಪಿ : ಬಲೀದ್ರ ಪೂಜೆ ಮಾಡುವ ಸಲುವಾಗಿ ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದ ಪರಿಣಾಮ ಆತ ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.
ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ.

ದೀಪಾವಳಿಯ ಬಲೀಂದ್ರ ಪೂಜೆಯ ಅಂಗವಾಗಿ ಗುರುವಾರ ರಾತ್ರಿ ರೋಹಿತ್ ಕುಮಾರ್ ಮತ್ತು ಸಹೋದರರು ಗದ್ದೆಗೆ ತೆರಳಿದ್ದು, ಈ ಸಂದರ್ಭ ರೋಹಿತ್ ಅವರಿಗೆ ವಿಷ ಜಂತು ಕಡಿದಿತ್ತು. ಮನೆಯವರು ತತ್ ಕ್ಷಣ ಅವರನ್ನು ನಾಟಿ ವೈದ್ಯರ ಬಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದ ರೋಹಿತ್, ಶುಕ್ರವಾರ ಸಂಜೆ ತೀವ್ರ ಅಸ್ವಸ್ಥಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

You may also like

Leave a Comment