2
Udhayanidhi Stalin: ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಶನಿವಾರ ಮೋದಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ರಾಮನಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯವು ತೆರಿಗೆಯಾಗಿ ಪಾವತಿ ಮಾಡುವ ಪ್ರತಿ ರೂಪಾಯಿಗೆ ಕೇವಲ 28 ಪೈಸೆಗಳನ್ನು ಮಾತ್ರ ಕೇಂದ್ರ ರಾಜ್ಯಕ್ಕೆ ಪಾವತಿಸಿದ್ದು, ಬಿಜೆಪಿ ಆಡಳಿತದ ರಾಜ್ಯಗಳು ಇದಕ್ಕಿಂತ ಹೆಚ್ಚು ಹಣ ಪಡೆಯುತ್ತದೆ ಎಂದು ಎಂದು ಆರೋಪವನ್ನು ಮಾಡಿದ್ದಾರೆ.
ಹಾಗಾಗಿ ನಾವು ಇನ್ನು ಮುಂದೆ ಪ್ರಧಾನಿಯನ್ನು 28ಪೈಸೆ ಪಿಎಂ ಎಂದು ಕರೆಯಬೇಕು ಎಂದು ಸ್ಟಾಲಿನ್ ವ್ಯಂಗ್ಯ ಮಾಡಿದ್ದಾರೆ. ಚುನಾವಣೆ ಬಂದಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
