Home » Parliment Election : ಮಂಗಳೂರು ಮತಗಟ್ಟೆ – ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ !!

Parliment Election : ಮಂಗಳೂರು ಮತಗಟ್ಟೆ – ಬಿಜೆಪಿ ಕಾರ್ಯಕರ್ತನಿಂದ ಗೂಂಡಾಗಿರಿ !!

2 comments
Parliament Election

Parliment Election : ರಾಜ್ಯದಲ್ಲಿ ಮತದಾನಕ್ಕೆ (Election) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಬೆಳಗ್ಗೆ 9 ಗಂಟೆಯ ವೇಳೆಗೆ ಕರ್ನಾಟಕದಲ್ಲಿ (Karnataka) 9.21% ಮತದಾನ ನಡೆದಿದೆ. ಎಲ್ಲೆಡೆ ಶಾಂತಿಯುತ ಮತದಾನ ನಡೆಯುತ್ತಿದೆ. ಆದರೆ ಆದರೆ ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಗೂಂಡಾಗಿರಿ ನಡೆಸಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:  OBC-Muslim Reservation: ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ ಕರ್ನಾಟಕದ ‘ಮುಸ್ಲಿಂ ಮೀಸಲಾತಿ’ – ಏನಿದು ‘ಒಬಿಸಿ- ಮುಸ್ಲಿಂ ಮೀಸಲಾತಿ’?

ಹೌದು, ನಗರದ ಕಂಕನಾಡಿ(Kankanadi) ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದೆ. ಕಾಂಗ್ರೆಸ್(Congress) ಅಭ್ಯರ್ಥಿ ಜೊತೆ ಜನ ಸೇರಿರೋದನ್ನು ಬಿಜೆಪಿ ಕಾರ್ಯಕರ್ತರ ಸಂದೀಪ್ ಎಕ್ಕೂರು(Sandeep Ekkaru) ಪ್ರಶ್ನಿಸಿದ್ದಾರೆ. ಈ ವೇಳೆ ಕಾರ್ಯಕರ್ತರಿಂದ ಮಾತಿನ ಚಕಮಕಿ ನಡೆದಿದೆ. ಅಲ್ಲದೇ ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದ ನಡೆದಿದ್ದು, ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮೆರೆದಿದ್ದಾರೆ. ಇತ್ತ ಇದನ್ನು ಚಿತ್ರೀಕರಣ ಮಾಡಿದ ಮಾಧ್ಯಮದವರ ಮೇಲೂ ಅವಾಚ್ಯ ಶಬ್ದಗಳಿಂದ ನಿಂದನೆ ಮಡಿದ್ದಾರೆ.

ಇದನ್ನೂ ಓದಿ:  Hubballi: ಫಯಾಜ್ ಮೊದಲೇ ನನ್ನ ಮಗಳನ್ನು ಕಿಡ್ನಾಪ್ ಮಾಡಲು ಸ್ಕೆಚ್ ಹಾಕಿದ್ದ – ಮತ್ತೊಂದು ಸತ್ಯ ಬಿಚ್ಚಿಟ್ಟ ನೇಹಾ ತಂದೆ !!

ಅಂದಹಾಗೆ ಇದುವರೆಗೂ ನಡೆದ ಮತದಾನದಲ್ಲಿ ದಕ್ಷಿಣ ಕನ್ನಡದಲ್ಲಿ (Dakshina Kannada) ಅತಿ ಹೆಚ್ಚು 14.33% ದಾಖಲಾದರೆ ಚಾಮರಾಜನಗರ ಮತ್ತು ಮಂಡ್ಯದಲ್ಲಿ 7.70% ಮತದಾನ ದಾಖಲಾಗಿದೆ. ರಾಜ್ಯದ ಕೆಲವೆಡೆ ಎವಿಎಂ ದೋಷದಿಂದಾಗಿ ಕೆಲ ಸಮಸ್ಯೆಯಾಗಿತ್ತು. ನಂತರ ಇವಿಎಂ ದೋಷವನ್ನು ಸರಿಪಡಿಸಿದ್ದು ಈಗ ಮತದಾನ ನಡೆಯುತ್ತಿದೆ. ಬೆಂಗಳೂರಿನಲ್ಲಿ ಉತ್ತಮ ಪತಿಕ್ರಿಯೆ ವ್ಯಕ್ತವಾಗುತ್ತಿದೆ. ಬೆಳಗ್ಗೆ ಹಲವು ಮತಗಟ್ಟೆಗಳಲ್ಲಿ ಮತದಾರರು ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.

You may also like

Leave a Comment